ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯಲು ಅವಕಾಶ ನೀಡಬಾರದು. ಈ ಬಸ್ ನಿಲ್ದಾಣದಿಂದ ನಗರ ಸಾರಿಗೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕಡೆಗೆ ಸಂಚರಿಸುವ ಬಸ್ ಗಳ ಸೇವೆಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಗುರುವಾರ ಕೆಎಸ್ ಆರ್ ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ರೈತರು, ವಿದ್ಯಾರ್ಥಿಗಳು ಈ ಭಾಗದಲ್ಲಿ ಕಾಲೇಜು, ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆ, ಎಪಿಎಂಸಿ, ಕ್ರೀಡಾಂಗಣ, ಅಂಚೆ ಕಚೇರಿ, ನಗರಸಭೆ ಕೋರ್ಟ್ ಸೇರಿದಂತೆ ದೈನಂದಿನ ಕೆಲಸಕ್ಕೆ ಬಂದು ಹೋಗುವ ಎಲ್ಲಾ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಅದೇರೀತಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸದೆ ಬಸ್ ನಿಲ್ದಾಣವನ್ನಾಗಿಯೇ ಮುಂದುವರಿಸಬೇಕು. ಬೇರೆ ಉದ್ದೇಶಕ್ಕೆ ಅನುವು ಮಾಡಿಕೊಟ್ಟಿದ್ದೆ ಆದಲ್ಲಿ ದೊಡ್ಡಬಳ್ಳಾಪುರದ ನಾಗರೀಕರ ಪರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಚಿಂತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡದೆ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಉಳಿಸಿಕೊಂಡು, ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯರ್ದರ್ಶಿ ರಮೇಶ್ ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…