ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯಲು ಅವಕಾಶ ನೀಡಬಾರದು. ಈ ಬಸ್ ನಿಲ್ದಾಣದಿಂದ ನಗರ ಸಾರಿಗೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕಡೆಗೆ ಸಂಚರಿಸುವ ಬಸ್ ಗಳ ಸೇವೆಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಗುರುವಾರ ಕೆಎಸ್ ಆರ್ ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ರೈತರು, ವಿದ್ಯಾರ್ಥಿಗಳು ಈ ಭಾಗದಲ್ಲಿ ಕಾಲೇಜು, ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆ, ಎಪಿಎಂಸಿ, ಕ್ರೀಡಾಂಗಣ, ಅಂಚೆ ಕಚೇರಿ, ನಗರಸಭೆ ಕೋರ್ಟ್ ಸೇರಿದಂತೆ ದೈನಂದಿನ ಕೆಲಸಕ್ಕೆ ಬಂದು ಹೋಗುವ ಎಲ್ಲಾ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಅದೇರೀತಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸದೆ ಬಸ್ ನಿಲ್ದಾಣವನ್ನಾಗಿಯೇ ಮುಂದುವರಿಸಬೇಕು. ಬೇರೆ ಉದ್ದೇಶಕ್ಕೆ ಅನುವು ಮಾಡಿಕೊಟ್ಟಿದ್ದೆ ಆದಲ್ಲಿ ದೊಡ್ಡಬಳ್ಳಾಪುರದ ನಾಗರೀಕರ ಪರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಚಿಂತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡದೆ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಉಳಿಸಿಕೊಂಡು, ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯರ್ದರ್ಶಿ ರಮೇಶ್ ಇದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…