ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯುವುದಕ್ಕೆ ವಿರೋಧ

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯಲು ಅವಕಾಶ ನೀಡಬಾರದು. ಈ ಬಸ್ ನಿಲ್ದಾಣದಿಂದ ನಗರ ಸಾರಿಗೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕಡೆಗೆ ಸಂಚರಿಸುವ ಬಸ್ ಗಳ ಸೇವೆಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಗುರುವಾರ ಕೆಎಸ್ ಆರ್ ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ನಗರ ಸಾರಿಗೆ ಬಸ್ ಸೇವೆಯ ಅಗತ್ಯ ಇದೆ. ನಗರದ ಮಧ್ಯಭಾಗದಲ್ಲಿ ಈಗ ಇರುವ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಾರ್ವಜನಿಕರು ಹೋಗಿ ಬರಲು ಸಂಚಾರ ದಟ್ಟಣೆ ಮಿತಿ ಮೀರಿ ಹೋಗಿದೆ. ಅತ್ಯಂತ ಕಿರಿದಾದ ರಸ್ತೆಗಳು ಇರುವ ಕಾರಣದಿಂದಾಗಿ ಬಸ್ ಗಳು ಸಹ ಸಂಚರಿಸಲು ಕಷ್ಟವಾಗಿದೆ. ಈ ಎಲ್ಲಾ ಕಾರಣದಿಂದ ನಗರದ ಹೊರಭಾಗದಲ್ಲಿ ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಅವರು ಹೊಸ ಬಸ್ ನಿಲ್ದಾಣವನ್ನು ಸ್ಥಾಪನೆ ಮಾಡಿದ್ದರು. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಸಾರ್ವಜನಿಕರ ಸೇವೆಗೆ ಅನುಕೂಲ ಮಾಡಿಕೊಡಬೇಕಿದೆ. ಬಸ್ ನಿಲ್ದಾಣ ಖಾಸಗಿ ವ್ಯಕ್ತಿಗಳ ಸ್ವತ್ತಾಗಲು ಅವಕಾಶ ನೀಡಬಾರದು ಎಂದರು.

 

ಈ ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ರೈತರು, ವಿದ್ಯಾರ್ಥಿಗಳು ಈ ಭಾಗದಲ್ಲಿ ಕಾಲೇಜು, ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆ, ಎಪಿಎಂಸಿ, ಕ್ರೀಡಾಂಗಣ, ಅಂಚೆ ಕಚೇರಿ, ನಗರಸಭೆ ಕೋರ್ಟ್ ಸೇರಿದಂತೆ ದೈನಂದಿನ ಕೆಲಸಕ್ಕೆ ಬಂದು ಹೋಗುವ ಎಲ್ಲಾ ಸಾರ್ವಜನಿಕರಿಗೆ  ಅನುಕೂಲವಾಗಲಿದೆ ಎಂದರು.

ಅದೇರೀತಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸದೆ ಬಸ್ ನಿಲ್ದಾಣವನ್ನಾಗಿಯೇ ಮುಂದುವರಿಸಬೇಕು. ಬೇರೆ ಉದ್ದೇಶಕ್ಕೆ ಅನುವು ಮಾಡಿಕೊಟ್ಟಿದ್ದೆ ಆದಲ್ಲಿ ದೊಡ್ಡಬಳ್ಳಾಪುರದ ನಾಗರೀಕರ ಪರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಚಿಂತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡದೆ ಬಸ್‌ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಉಳಿಸಿಕೊಂಡು, ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಘಟಕದ ವ್ಯವಸ್ಥಾಪಕ ಸಂತೋಷ್, ಇಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬಂಕ್ ಸ್ಥಾಪನೆಗೆ ಇರುವ ವಿರೋಧವನ್ನು ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯರ್ದರ್ಶಿ ರಮೇಶ್ ಇದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago