ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯುವುದಕ್ಕೆ ವಿರೋಧ

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪದ ಕೆಎಸ್ಆರ್ ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯಲು ಅವಕಾಶ ನೀಡಬಾರದು. ಈ ಬಸ್ ನಿಲ್ದಾಣದಿಂದ ನಗರ ಸಾರಿಗೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಕಡೆಗೆ ಸಂಚರಿಸುವ ಬಸ್ ಗಳ ಸೇವೆಯನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಗುರುವಾರ ಕೆಎಸ್ ಆರ್ ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಸ್.ಆರ್ ಸಂತೋಷ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ವೇಗವಾಗಿ ಬೆಳೆಯುತ್ತಿರುವ ನಗರಕ್ಕೆ ನಗರ ಸಾರಿಗೆ ಬಸ್ ಸೇವೆಯ ಅಗತ್ಯ ಇದೆ. ನಗರದ ಮಧ್ಯಭಾಗದಲ್ಲಿ ಈಗ ಇರುವ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಾರ್ವಜನಿಕರು ಹೋಗಿ ಬರಲು ಸಂಚಾರ ದಟ್ಟಣೆ ಮಿತಿ ಮೀರಿ ಹೋಗಿದೆ. ಅತ್ಯಂತ ಕಿರಿದಾದ ರಸ್ತೆಗಳು ಇರುವ ಕಾರಣದಿಂದಾಗಿ ಬಸ್ ಗಳು ಸಹ ಸಂಚರಿಸಲು ಕಷ್ಟವಾಗಿದೆ. ಈ ಎಲ್ಲಾ ಕಾರಣದಿಂದ ನಗರದ ಹೊರಭಾಗದಲ್ಲಿ ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಅವರು ಹೊಸ ಬಸ್ ನಿಲ್ದಾಣವನ್ನು ಸ್ಥಾಪನೆ ಮಾಡಿದ್ದರು. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಸಾರ್ವಜನಿಕರ ಸೇವೆಗೆ ಅನುಕೂಲ ಮಾಡಿಕೊಡಬೇಕಿದೆ. ಬಸ್ ನಿಲ್ದಾಣ ಖಾಸಗಿ ವ್ಯಕ್ತಿಗಳ ಸ್ವತ್ತಾಗಲು ಅವಕಾಶ ನೀಡಬಾರದು ಎಂದರು.

 

ಈ ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ರೈತರು, ವಿದ್ಯಾರ್ಥಿಗಳು ಈ ಭಾಗದಲ್ಲಿ ಕಾಲೇಜು, ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆ, ಎಪಿಎಂಸಿ, ಕ್ರೀಡಾಂಗಣ, ಅಂಚೆ ಕಚೇರಿ, ನಗರಸಭೆ ಕೋರ್ಟ್ ಸೇರಿದಂತೆ ದೈನಂದಿನ ಕೆಲಸಕ್ಕೆ ಬಂದು ಹೋಗುವ ಎಲ್ಲಾ ಸಾರ್ವಜನಿಕರಿಗೆ  ಅನುಕೂಲವಾಗಲಿದೆ ಎಂದರು.

ಅದೇರೀತಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸದೆ ಬಸ್ ನಿಲ್ದಾಣವನ್ನಾಗಿಯೇ ಮುಂದುವರಿಸಬೇಕು. ಬೇರೆ ಉದ್ದೇಶಕ್ಕೆ ಅನುವು ಮಾಡಿಕೊಟ್ಟಿದ್ದೆ ಆದಲ್ಲಿ ದೊಡ್ಡಬಳ್ಳಾಪುರದ ನಾಗರೀಕರ ಪರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ಚಿಂತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡದೆ ಬಸ್‌ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಉಳಿಸಿಕೊಂಡು, ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಘಟಕದ ವ್ಯವಸ್ಥಾಪಕ ಸಂತೋಷ್, ಇಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬಂಕ್ ಸ್ಥಾಪನೆಗೆ ಇರುವ ವಿರೋಧವನ್ನು ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯರ್ದರ್ಶಿ ರಮೇಶ್ ಇದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago