ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಬೆಳಕಿಗೆ ಬಂದಿದೆ.

ಬಾಲಕಿಯರ ತಂದೆಯೇ ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕೆಐಎಎಲ್ ಏರ್‌ಪೋರ್ಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಬಾಲಕಿಯರನ್ನು ಶೈಕ್ ಝಹೆರಾ (5) ಹಾಗೂ ಶೈಕ್ ಝೋಯಾ (10) ಎಂದು ಗುರುತಿಸಲಾಗಿದೆ. ನಾಗವಾರ ಮೂಲದ ಎಸ್.ಜಿ. ಇಮ್ರಾನ್ (40) ಎಂಬಾತ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನ ನಾಲ್ಕನೇ ಮಹಡಿಯಲ್ಲಿ ಕೊಠಡಿ ಬುಕ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಸೋಮವಾರ ಸಂಜೆ ಹೋಟೆಲ್‌ನ ಭದ್ರತಾ ಸಿಬ್ಬಂದಿಯಿಂದ ಪೊಲೀಸರಿಗೆ ಮಾಹಿತಿ ಬಂದಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಬ್ಬರು ಬಾಲಕಿಯರು ಮೃತಪಟ್ಟಿರುವುದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಇಬ್ಬರು ಬಾಲಕಿಯರಿಗೆ ನೇಣು ಬಿಗಿದಿರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳ ಸಾವಿನ ಬಳಿಕ ತಂದೆ ಇಮ್ರಾನ್ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದ್ದು, ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತ್ನಿಯ ಮೇಲಿನ ಅನುಮಾನ ಶಂಕೆ

ಇಮ್ರಾನ್‌ಗೆ ಪತ್ನಿಯ ಮೇಲೆ ಅನುಮಾನವಿತ್ತು ಎನ್ನಲಾಗಿದ್ದು, ಇದೇ ಕಾರಣಕ್ಕೆ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಇಮ್ರಾನ್ ಡೆತ್‌ನೋಟ್ ಬರೆದಿಟ್ಟಿದ್ದ ಎನ್ನಲಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್‌ನೋಟ್‌ನಲ್ಲಿ ಏನು ಉಲ್ಲೇಖಿಸಲಾಗಿದೆ, ಮಕ್ಕಳ ಸಾವಿಗೆ ನಿಖರ ಕಾರಣವೇನು ಹಾಗೂ ಘಟನೆ ನಡೆದ ಸಂದರ್ಭಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಘಟನಾ ಸ್ಥಳಕ್ಕೆ ಕೆಐಎಎಲ್ ಏರ್‌ಪೋರ್ಟ್ ಪೊಲೀಸರು ಭೇಟಿ ನೀಡಿ ಹೋಟೆಲ್ ಕೊಠಡಿ, ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

17 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

19 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago