ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಬೆಳಕಿಗೆ ಬಂದಿದೆ.

ಬಾಲಕಿಯರ ತಂದೆಯೇ ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕೆಐಎಎಲ್ ಏರ್‌ಪೋರ್ಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಬಾಲಕಿಯರನ್ನು ಶೈಕ್ ಝಹೆರಾ (5) ಹಾಗೂ ಶೈಕ್ ಝೋಯಾ (10) ಎಂದು ಗುರುತಿಸಲಾಗಿದೆ. ನಾಗವಾರ ಮೂಲದ ಎಸ್.ಜಿ. ಇಮ್ರಾನ್ (40) ಎಂಬಾತ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನ ನಾಲ್ಕನೇ ಮಹಡಿಯಲ್ಲಿ ಕೊಠಡಿ ಬುಕ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಸೋಮವಾರ ಸಂಜೆ ಹೋಟೆಲ್‌ನ ಭದ್ರತಾ ಸಿಬ್ಬಂದಿಯಿಂದ ಪೊಲೀಸರಿಗೆ ಮಾಹಿತಿ ಬಂದಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಬ್ಬರು ಬಾಲಕಿಯರು ಮೃತಪಟ್ಟಿರುವುದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಇಬ್ಬರು ಬಾಲಕಿಯರಿಗೆ ನೇಣು ಬಿಗಿದಿರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳ ಸಾವಿನ ಬಳಿಕ ತಂದೆ ಇಮ್ರಾನ್ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದ್ದು, ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತ್ನಿಯ ಮೇಲಿನ ಅನುಮಾನ ಶಂಕೆ

ಇಮ್ರಾನ್‌ಗೆ ಪತ್ನಿಯ ಮೇಲೆ ಅನುಮಾನವಿತ್ತು ಎನ್ನಲಾಗಿದ್ದು, ಇದೇ ಕಾರಣಕ್ಕೆ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಇಮ್ರಾನ್ ಡೆತ್‌ನೋಟ್ ಬರೆದಿಟ್ಟಿದ್ದ ಎನ್ನಲಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಡೆತ್‌ನೋಟ್‌ನಲ್ಲಿ ಏನು ಉಲ್ಲೇಖಿಸಲಾಗಿದೆ, ಮಕ್ಕಳ ಸಾವಿಗೆ ನಿಖರ ಕಾರಣವೇನು ಹಾಗೂ ಘಟನೆ ನಡೆದ ಸಂದರ್ಭಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಬಾಲಕಿಯರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಘಟನಾ ಸ್ಥಳಕ್ಕೆ ಕೆಐಎಎಲ್ ಏರ್‌ಪೋರ್ಟ್ ಪೊಲೀಸರು ಭೇಟಿ ನೀಡಿ ಹೋಟೆಲ್ ಕೊಠಡಿ, ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

4 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago