ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು ಹಾಗೂ ಚಿನ್ನದ ಕಳ್ಳಸಾಗಣೆಯ ನಾಲ್ಕು ಪ್ರತ್ಯೇಕ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ₹4.33 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೂನ್ 17ರಂದು ಬ್ಯಾಂಕಾಕ್ನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ ಅಧಿಕಾರಿಗಳು, ಅವರ ಕ್ಯಾಬಿನ್ ಬ್ಯಾಗೇಜ್ನಲ್ಲಿ ಅಡಗಿಸಿಟ್ಟಿದ್ದ 2.02 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು ₹70.7 ಲಕ್ಷ ಎಂದು ಅಂದಾಜಿಸಲಾಗಿದ್ದು, ಇಬ್ಬರನ್ನೂ 1985ರ ಎನ್ಡಿಪಿಎಸ್ (NDPS) ಕಾಯ್ದೆಯಡಿ ಬಂಧಿಸಲಾಗಿದೆ.
ಇದಾದ ಬಳಿಕ ಜೂನ್ 19ರಂದು ಬ್ಯಾಂಕಾಕ್ನಿಂದ ಬಂದ ಮತ್ತೋರ್ವ ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್ನಲ್ಲಿ ಬಚ್ಚಿಟ್ಟಿದ್ದ 5.98 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು ₹2.09 ಕೋಟಿ ಎಂದು ತಿಳಿದುಬಂದಿದ್ದು, ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.
ಜೂನ್ 20ರಂದು ದುಬೈನಿಂದ ಆಗಮಿಸಿದ್ದ ಪ್ರಯಾಣಿಕನ ಬ್ಯಾಗೇಜ್ ತಪಾಸಣೆ ವೇಳೆ 575.6 ಗ್ರಾಂ ಚಿನ್ನ ಹಾಗೂ 32,000 ಸಿಗರೇಟ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹89.40 ಲಕ್ಷ ಎಂದು ಅಂದಾಜಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಅದೇ ರೀತಿ ಜೂನ್ 21ರಂದು ಕೌಲಾಲಂಪುರದಿಂದ ಬಂದ ಪ್ರಯಾಣಿಕನ ಪ್ಯಾಂಟ್ ಜೇಬಿನಲ್ಲಿ ಬಚ್ಚಿಟ್ಟಿದ್ದ 427.67 ಗ್ರಾಂ ಚಿನ್ನದ ಆಭರಣಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ₹64 ಲಕ್ಷವಾಗಿದ್ದು, ಆರೋಪಿಯನ್ನು ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ.
ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ನಿರಂತರ ನಿಗಾ ಮತ್ತು ಕಟ್ಟುನಿಟ್ಟಿನ ತಪಾಸಣೆಯಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿದ್ದ ಕಳ್ಳಸಾಗಣೆ ಪ್ರಯತ್ನಗಳು ಒಂದರ ಹಿಂದೆ ಒಂದರಂತೆ ಬಯಲಾಗುತ್ತಿದ್ದು, ಆರೋಪಿಗಳ ವಿರುದ್ಧ ಕಾನೂನು
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…
ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.…