ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೊಡಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವರನ್ನ ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ ಬುಧವಾರ ಬೆಳಿಗ್ಗೆ ಭೇಟಿ ಮಾಡಿ ರೈತರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.
ಈ ವಿಚಾರವಾಗಿ ರಾಜ್ಯದ ಬೃಹತ್ ಕೈಗಾರಿಕಾ ಸಚಿವರು ಆದ ಎಂ.ಬಿ.ಪಾಟೀಲ್ ರವರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ರೈತರ ವಿಚಾರವಾಗಿ ಸೂಕ್ತ ನಿರ್ಣಯ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಲು ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹ ರೈತರ ಸಮಸ್ಯೆಗಳನ್ನು ಚರ್ಚಿಸಿದ ಅವರು ರೈತರ ಮನವಿಗೆ ಸ್ಪಂದಿಸುವಂತೆ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಜರುಗಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೊನಘಟ್ಟ ಕೊಡಹಳ್ಳಿ ಗ್ರಾಮಗಳ ರೈತರು ಹಾಗೂ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…