ಕೆಐಎಡಿಬಿ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತರಿಂದ ದೂರು

ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೊಡಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ನೇತೃತ್ವದಲ್ಲಿ  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವರನ್ನ ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ   ಬುಧವಾರ ಬೆಳಿಗ್ಗೆ ಭೇಟಿ ಮಾಡಿ ರೈತರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.

ಈ ವಿಚಾರವಾಗಿ ರಾಜ್ಯದ ಬೃಹತ್ ಕೈಗಾರಿಕಾ ಸಚಿವರು ಆದ ಎಂ.ಬಿ.ಪಾಟೀಲ್ ರವರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ರೈತರ ವಿಚಾರವಾಗಿ ಸೂಕ್ತ ನಿರ್ಣಯ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಲು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹ ರೈತರ ಸಮಸ್ಯೆಗಳನ್ನು ಚರ್ಚಿಸಿದ ಅವರು ರೈತರ ಮನವಿಗೆ ಸ್ಪಂದಿಸುವಂತೆ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಜರುಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೊನಘಟ್ಟ ಕೊಡಹಳ್ಳಿ ಗ್ರಾಮಗಳ ರೈತರು ಹಾಗೂ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

15 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

22 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago