ಕೆಐಎಡಿಬಿ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರೈತರಿಂದ ದೂರು

ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೊಡಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ನೇತೃತ್ವದಲ್ಲಿ  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರವರನ್ನ ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ   ಬುಧವಾರ ಬೆಳಿಗ್ಗೆ ಭೇಟಿ ಮಾಡಿ ರೈತರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.

ಈ ವಿಚಾರವಾಗಿ ರಾಜ್ಯದ ಬೃಹತ್ ಕೈಗಾರಿಕಾ ಸಚಿವರು ಆದ ಎಂ.ಬಿ.ಪಾಟೀಲ್ ರವರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಿ ರೈತರ ವಿಚಾರವಾಗಿ ಸೂಕ್ತ ನಿರ್ಣಯ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸಲು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹ ರೈತರ ಸಮಸ್ಯೆಗಳನ್ನು ಚರ್ಚಿಸಿದ ಅವರು ರೈತರ ಮನವಿಗೆ ಸ್ಪಂದಿಸುವಂತೆ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಜರುಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೊನಘಟ್ಟ ಕೊಡಹಳ್ಳಿ ಗ್ರಾಮಗಳ ರೈತರು ಹಾಗೂ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

54 minutes ago

No Deposit Reward Casino Site List: Every Little Thing You Required to Know

When it involves on-line gambling enterpris padişahbet günceles, among one of the most tempting deals…

7 hours ago

Instant Play Casino

Instant play casinos allow you to play casino games online without installing any software. These…

16 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

19 hours ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

20 hours ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

21 hours ago