ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಅವೈಜ್ಞಾನಿಕ: 1:4ನಂತೆ ಬೆಲೆ ನಿಗದಿ ಮಾಡುವಂತೆ ಒತ್ತಾಯ

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.

ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.

 ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈವರೆಗೆ ಜಿಲ್ಲಾಧಿಕಾರಿಗಳು ಎರಡು ಸಭೆಗಳನ್ನು ನಡೆಸಿದ್ದಾರೆ ಆದರೆ ಯಾವ ಸಭೆಯಲ್ಲೂ ರೈತರು ಭಾಗವಹಿಸಿಲ್ಲ, ದಾಖಲೆಗಳಲ್ಲಿ ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ ಇದೆ ಎಂದು ಬರೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊನಘಟ್ಟ ಗ್ರಾಮದ ರೈತ ಪಾಪೇಗೌಡ ಮಾತನಾಡಿ ಅನ್ನ ಹಾಕಿದ ನಾವು ಭಿಕ್ಷೆ ಬೇಡುವ ಪರಿಸ್ಥಿತಿ ಇದೆ, ನಾವು ಅನಾಥರಾಗುತ್ತೇವೆ. ಫಲವತ್ತಾದ ಕೃಷಿ ಭೂಮಿ ಬಿಟ್ಟು ನಾವು ಎಲ್ಲಿ ಹೋಗಬೇಕು ಎಂದು ಪ್ರಶ್ನಿಸಿದರು.

ರೈತ ಕೋಡಿಹಳ್ಳಿ ರಾಮೇಗೌಡ ಮಾತನಾಡಿ ಕೆಐಎಡಿಬಿ ಕಾಯ್ದೆ ಪ್ರಕಾರ ವ್ಯವಸಾಯಕ್ಕೆ ಸೂಕ್ತವಲ್ಲದ ಭೂಮಿಯಲ್ಲಿ ಕಾರ್ಖಾನೆಗಳನ್ನು ಮಾಡಬಹುದು, ಆದರೆ ಬಂಡವಾಳ ಶಾಹಿಗಳಿಗೆ ಇಲ್ಲಿಯ ಕೃಷಿ ಭೂಮಿಯೇ ಬೇಕಂತೆ. ಇಲ್ಲಿ ಯಾವ ರೈತನೂ ಭೂಮಿಯನ್ನು ಪಾಳು ಬಿಟ್ಟಿಲ್ಲ, ಬೇಕಾದರೆ ನಾವು ದ್ರೋಣ ಬಿಟ್ಟು ಸ್ವಂತ ಖರ್ಚಿನಲ್ಲಿ ವಿಡಿಯೋ ಮಾಡಿ ಕಳಿಸುತ್ತೇವೆ. ಅಧಿಕಾರಿಗಳು ಪರಿಶೀಲನೆ ಮಾಡಿಕೊಳ್ಳಲಿ ಎಂದರು.

ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಕೆಎಂ‌.ರಾಮಾಂಜಿನಪ್ಪ, ರೈತ ಮುಖಂಡರಾದ ಕೋಡಿಹಳ್ಳಿ ಸಿ.ಕೃಷ್ಣಪ್ಪ ನರಸಿಂಹಮೂರ್ತಿ, ಡಿ.ರಾಮಾಂಜಿನಪ್ಪ, ಮಧುರೆ ರಮೇಶ್, ರಂಗಸ್ವಾಮಿ ವಿ.ಆನಂದ್ ಕೋಡಿಹಳ್ಳಿ ಕೆಂಪಣ್ಣ, ಅಂಗಡಿ ಶ್ರೀನಿವಾಸ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

56 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

12 hours ago