ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಅವೈಜ್ಞಾನಿಕ: 1:4ನಂತೆ ಬೆಲೆ ನಿಗದಿ ಮಾಡುವಂತೆ ಒತ್ತಾಯ

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.

ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.

 ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈವರೆಗೆ ಜಿಲ್ಲಾಧಿಕಾರಿಗಳು ಎರಡು ಸಭೆಗಳನ್ನು ನಡೆಸಿದ್ದಾರೆ ಆದರೆ ಯಾವ ಸಭೆಯಲ್ಲೂ ರೈತರು ಭಾಗವಹಿಸಿಲ್ಲ, ದಾಖಲೆಗಳಲ್ಲಿ ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ ಇದೆ ಎಂದು ಬರೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊನಘಟ್ಟ ಗ್ರಾಮದ ರೈತ ಪಾಪೇಗೌಡ ಮಾತನಾಡಿ ಅನ್ನ ಹಾಕಿದ ನಾವು ಭಿಕ್ಷೆ ಬೇಡುವ ಪರಿಸ್ಥಿತಿ ಇದೆ, ನಾವು ಅನಾಥರಾಗುತ್ತೇವೆ. ಫಲವತ್ತಾದ ಕೃಷಿ ಭೂಮಿ ಬಿಟ್ಟು ನಾವು ಎಲ್ಲಿ ಹೋಗಬೇಕು ಎಂದು ಪ್ರಶ್ನಿಸಿದರು.

ರೈತ ಕೋಡಿಹಳ್ಳಿ ರಾಮೇಗೌಡ ಮಾತನಾಡಿ ಕೆಐಎಡಿಬಿ ಕಾಯ್ದೆ ಪ್ರಕಾರ ವ್ಯವಸಾಯಕ್ಕೆ ಸೂಕ್ತವಲ್ಲದ ಭೂಮಿಯಲ್ಲಿ ಕಾರ್ಖಾನೆಗಳನ್ನು ಮಾಡಬಹುದು, ಆದರೆ ಬಂಡವಾಳ ಶಾಹಿಗಳಿಗೆ ಇಲ್ಲಿಯ ಕೃಷಿ ಭೂಮಿಯೇ ಬೇಕಂತೆ. ಇಲ್ಲಿ ಯಾವ ರೈತನೂ ಭೂಮಿಯನ್ನು ಪಾಳು ಬಿಟ್ಟಿಲ್ಲ, ಬೇಕಾದರೆ ನಾವು ದ್ರೋಣ ಬಿಟ್ಟು ಸ್ವಂತ ಖರ್ಚಿನಲ್ಲಿ ವಿಡಿಯೋ ಮಾಡಿ ಕಳಿಸುತ್ತೇವೆ. ಅಧಿಕಾರಿಗಳು ಪರಿಶೀಲನೆ ಮಾಡಿಕೊಳ್ಳಲಿ ಎಂದರು.

ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಕೆಎಂ‌.ರಾಮಾಂಜಿನಪ್ಪ, ರೈತ ಮುಖಂಡರಾದ ಕೋಡಿಹಳ್ಳಿ ಸಿ.ಕೃಷ್ಣಪ್ಪ ನರಸಿಂಹಮೂರ್ತಿ, ಡಿ.ರಾಮಾಂಜಿನಪ್ಪ, ಮಧುರೆ ರಮೇಶ್, ರಂಗಸ್ವಾಮಿ ವಿ.ಆನಂದ್ ಕೋಡಿಹಳ್ಳಿ ಕೆಂಪಣ್ಣ, ಅಂಗಡಿ ಶ್ರೀನಿವಾಸ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

19 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

24 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago