ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.
ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…