ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಅವೈಜ್ಞಾನಿಕ: 1:4ನಂತೆ ಬೆಲೆ ನಿಗದಿ ಮಾಡುವಂತೆ ಒತ್ತಾಯ

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.

ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.

 ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈವರೆಗೆ ಜಿಲ್ಲಾಧಿಕಾರಿಗಳು ಎರಡು ಸಭೆಗಳನ್ನು ನಡೆಸಿದ್ದಾರೆ ಆದರೆ ಯಾವ ಸಭೆಯಲ್ಲೂ ರೈತರು ಭಾಗವಹಿಸಿಲ್ಲ, ದಾಖಲೆಗಳಲ್ಲಿ ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ ಇದೆ ಎಂದು ಬರೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊನಘಟ್ಟ ಗ್ರಾಮದ ರೈತ ಪಾಪೇಗೌಡ ಮಾತನಾಡಿ ಅನ್ನ ಹಾಕಿದ ನಾವು ಭಿಕ್ಷೆ ಬೇಡುವ ಪರಿಸ್ಥಿತಿ ಇದೆ, ನಾವು ಅನಾಥರಾಗುತ್ತೇವೆ. ಫಲವತ್ತಾದ ಕೃಷಿ ಭೂಮಿ ಬಿಟ್ಟು ನಾವು ಎಲ್ಲಿ ಹೋಗಬೇಕು ಎಂದು ಪ್ರಶ್ನಿಸಿದರು.

ರೈತ ಕೋಡಿಹಳ್ಳಿ ರಾಮೇಗೌಡ ಮಾತನಾಡಿ ಕೆಐಎಡಿಬಿ ಕಾಯ್ದೆ ಪ್ರಕಾರ ವ್ಯವಸಾಯಕ್ಕೆ ಸೂಕ್ತವಲ್ಲದ ಭೂಮಿಯಲ್ಲಿ ಕಾರ್ಖಾನೆಗಳನ್ನು ಮಾಡಬಹುದು, ಆದರೆ ಬಂಡವಾಳ ಶಾಹಿಗಳಿಗೆ ಇಲ್ಲಿಯ ಕೃಷಿ ಭೂಮಿಯೇ ಬೇಕಂತೆ. ಇಲ್ಲಿ ಯಾವ ರೈತನೂ ಭೂಮಿಯನ್ನು ಪಾಳು ಬಿಟ್ಟಿಲ್ಲ, ಬೇಕಾದರೆ ನಾವು ದ್ರೋಣ ಬಿಟ್ಟು ಸ್ವಂತ ಖರ್ಚಿನಲ್ಲಿ ವಿಡಿಯೋ ಮಾಡಿ ಕಳಿಸುತ್ತೇವೆ. ಅಧಿಕಾರಿಗಳು ಪರಿಶೀಲನೆ ಮಾಡಿಕೊಳ್ಳಲಿ ಎಂದರು.

ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಕೆಎಂ‌.ರಾಮಾಂಜಿನಪ್ಪ, ರೈತ ಮುಖಂಡರಾದ ಕೋಡಿಹಳ್ಳಿ ಸಿ.ಕೃಷ್ಣಪ್ಪ ನರಸಿಂಹಮೂರ್ತಿ, ಡಿ.ರಾಮಾಂಜಿನಪ್ಪ, ಮಧುರೆ ರಮೇಶ್, ರಂಗಸ್ವಾಮಿ ವಿ.ಆನಂದ್ ಕೋಡಿಹಳ್ಳಿ ಕೆಂಪಣ್ಣ, ಅಂಗಡಿ ಶ್ರೀನಿವಾಸ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

5 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago