ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.
ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…