ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.
ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…