ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.
ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…