ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಅವೈಜ್ಞಾನಿಕ: 1:4ನಂತೆ ಬೆಲೆ ನಿಗದಿ ಮಾಡುವಂತೆ ಒತ್ತಾಯ

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಟಿಎಪಿಎಂಸಿಎಸ್ ಸದಸ್ಯ ಆನಂದ್ ಅವರು ಆರೋಪಿಸಿದರು.

ತಾಲ್ಲೂಕಿನ ಕೊನಘಟ್ಟ ಗ್ರಾಮದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರುದ್ಧ ಕೊನಘಟ್ಟ ಗ್ರಾಮದ ರೈತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ನವೆಂಬರ್ 3 ನೇ ತಾರೀಖು ಜಿಲ್ಲಾಡಳಿತ ಭವನದ ಬಳಿಯ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ರೈತರ ಸಭೆ ಕರೆದಿದ್ದ ಜಿಲ್ಲಾಧಿಕಾರಿಗಳು, ತಾಲ್ಲೂಕಿನ ಕಸಭಾ ಹೋಬಳಿಯ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ಲಿಂಗನಹಳ್ಳಿ ಮೂರು ಗ್ರಾಮಗಳ ಜಮೀನು ಭೂಸ್ವಾಧೀನಕ್ಕೆ ಒಳಪಟ್ಟಿದೆ ಎಂದು ಹೇಳುತ್ತಿದ್ದಾರೆ, ಇಲ್ಲಿಯ ವರೆಗೂ ಯಾವುದೇ ರೈತರಿಗೆ ನೋಟೀಸ್ ನೀಡಿಲ್ಲ, ಅಳತೆ ಮಾಡಲು ನಮ್ಮ ಅನುಮತಿ ಪಡೆದಿಲ್ಲ ಎಂದರು.

 ಭೂಸ್ವಾಧೀನ ಪ್ರಕ್ರಿಯೆಯನ್ನು ಅವೈಜ್ಞಾನಿಕವಾಗಿ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ನನ್ನದೇ ಭೂಮಿ ಅಳತೆ ಮಾಡುವಾಗ ನನ್ನ ಗಮನಕ್ಕೆ ತಾರದೇ ಮಾಡಿದ್ದಾರೆ, ಮೊನ್ನೆ ಕೆಐಎಡಿಬಿ ಕಚೇರಿಗೆ ಹೋಗಿ ಪರಿಶೀಲನೆ ಮಾಡಿದಾಗ ನನ್ನ ಭೂಮಿ ಅಳತೆ ಮಾಡುವಾಗ ನಾನು ಜಮೀನಿನಲ್ಲಿ ಇರಲಿಲ್ಲ ಎಂದು ಸುಳ್ಳು ಬರೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈವರೆಗೆ ಜಿಲ್ಲಾಧಿಕಾರಿಗಳು ಎರಡು ಸಭೆಗಳನ್ನು ನಡೆಸಿದ್ದಾರೆ ಆದರೆ ಯಾವ ಸಭೆಯಲ್ಲೂ ರೈತರು ಭಾಗವಹಿಸಿಲ್ಲ, ದಾಖಲೆಗಳಲ್ಲಿ ಭೂಸ್ವಾಧೀನಕ್ಕೆ ರೈತರ ಒಪ್ಪಿಗೆ ಇದೆ ಎಂದು ಬರೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳು ನಮ್ಮನ್ನು ಸಭೆಗೆ ಕರೆದು ಎಕರೆಗೆ ಒಂದು ಕೋಟಿ ನಲವತ್ತು ಲಕ್ಷ ಕೊಡ್ತೀವಿ ಎಂದು ಭಾಷಣ ಮಾಡಿ ಎದ್ದು ಹೋಗಿದ್ದಾರೆ. ಆದರೆ ಸಭೆಯಲ್ಲಿ ರೈತರಿಗೆ ಅನುಕೂಲವಾಗು ಒಂದು ಮಾತು ಹೇಳಲಿಲ್ಲ, ಅಧಿಕಾರಿಗಳು ಬ್ರೋಕರ್ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊನಘಟ್ಟ ಗ್ರಾಮದ ರೈತ ಪಾಪೇಗೌಡ ಮಾತನಾಡಿ ಅನ್ನ ಹಾಕಿದ ನಾವು ಭಿಕ್ಷೆ ಬೇಡುವ ಪರಿಸ್ಥಿತಿ ಇದೆ, ನಾವು ಅನಾಥರಾಗುತ್ತೇವೆ. ಫಲವತ್ತಾದ ಕೃಷಿ ಭೂಮಿ ಬಿಟ್ಟು ನಾವು ಎಲ್ಲಿ ಹೋಗಬೇಕು ಎಂದು ಪ್ರಶ್ನಿಸಿದರು.

ರೈತ ಕೋಡಿಹಳ್ಳಿ ರಾಮೇಗೌಡ ಮಾತನಾಡಿ ಕೆಐಎಡಿಬಿ ಕಾಯ್ದೆ ಪ್ರಕಾರ ವ್ಯವಸಾಯಕ್ಕೆ ಸೂಕ್ತವಲ್ಲದ ಭೂಮಿಯಲ್ಲಿ ಕಾರ್ಖಾನೆಗಳನ್ನು ಮಾಡಬಹುದು, ಆದರೆ ಬಂಡವಾಳ ಶಾಹಿಗಳಿಗೆ ಇಲ್ಲಿಯ ಕೃಷಿ ಭೂಮಿಯೇ ಬೇಕಂತೆ. ಇಲ್ಲಿ ಯಾವ ರೈತನೂ ಭೂಮಿಯನ್ನು ಪಾಳು ಬಿಟ್ಟಿಲ್ಲ, ಬೇಕಾದರೆ ನಾವು ದ್ರೋಣ ಬಿಟ್ಟು ಸ್ವಂತ ಖರ್ಚಿನಲ್ಲಿ ವಿಡಿಯೋ ಮಾಡಿ ಕಳಿಸುತ್ತೇವೆ. ಅಧಿಕಾರಿಗಳು ಪರಿಶೀಲನೆ ಮಾಡಿಕೊಳ್ಳಲಿ ಎಂದರು.

ನಿಜಕ್ಕೂ ನಿಮಗೆ ಎಲ್ಲ ಜನರ ಕೈಗೆ ಉದ್ಯೋಗ ನೀಡುವ ಮನಸ್ಸಿದ್ದರೆ ಸಮಗ್ರ ಕರ್ನಾಟಕ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಬಂಜರು ಭೂಮಿಗಳಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿ ಎಂದು ಸವಾಲು ಎಸೆದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಕೆಎಂ‌.ರಾಮಾಂಜಿನಪ್ಪ, ರೈತ ಮುಖಂಡರಾದ ಕೋಡಿಹಳ್ಳಿ ಸಿ.ಕೃಷ್ಣಪ್ಪ ನರಸಿಂಹಮೂರ್ತಿ, ಡಿ.ರಾಮಾಂಜಿನಪ್ಪ, ಮಧುರೆ ರಮೇಶ್, ರಂಗಸ್ವಾಮಿ ವಿ.ಆನಂದ್ ಕೋಡಿಹಳ್ಳಿ ಕೆಂಪಣ್ಣ, ಅಂಗಡಿ ಶ್ರೀನಿವಾಸ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

7 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

10 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago