ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಸೇರಿದಂತೆ ಐದು ಗ್ರಾಮಗಳ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದಕ್ಕೆ ರೈತರು ತೀವ್ರ ಆಕ್ರೋಶ ಹೊರಹಾಕಿದರು.
ದೊಡ್ಡಬೆಳವಂಗಲ ಹೋರಾಟ ಕೇಂದ್ರದಿಂದ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದವರೆಗೆ ನಡೆದ ರ್ಯಾಲಿಯಲ್ಲಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಲ್ಲಿ ರೈತರು ಭಾಗವಹಿಸಿ ಪ್ರತಿಭಟನೆ ನಡೆಸಿದರು.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ರೈತರ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ವಿಶೇಷವಾಗಿ ಚನ್ನರಾಯಪಟ್ಟಣ ಭೂ ಸ್ವಾಧೀನ ಹೋರಾಟ ಸಮಿತಿಯೂ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಾಜ್ ಮುನಿರಾಜು ಹಾಗೂ ಮಾಜಿ ಶಾಸಕ ವೆಂಕಟರಮಣಯ್ಯ ಭಾಗವಹಿಸಿ ರೈತರ ಪರವಾಗಿ ಧ್ವನಿ ಎತ್ತಿದರು.
“ಫಲವತ್ತಾದ ಕೃಷಿ ಭೂಮಿ ನಮ್ಮ ಜೀವನಾಧಾರ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಕೂಡಲೇ ಹಿಂದೆ ಸರಿಯಬೇಕು. ನಮ್ಮ ಭೂಮಿ ನಮಗೇ ಉಳಿಯಬೇಕು. ಒಂದು ವೇಳೆ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದುವರಿಸಿದರೆ ತಕ್ಕ ಪಾಠ ಕಲಿಸುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದರು.
ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…