‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜೂ.5ರಂದು ನಡೆಯುತ್ತಿರುವ ರೈತರ ವಿಧಾನಸೌಧ ಚಲೋ ಪ್ರತಿಭಟನೆಗೆ ಬೆಂಬಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲೆಯ ರೈತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ಫಲವತ್ತಾದ ಕೃಷಿ ಭೂಮಿಗಳನ್ನು ಕೈಗಾರಿಕೆ ಹೆಸರಿನಲ್ಲಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಕ್ರಮ ಖಂಡನೀಯವಾಗಿದೆ. ನಮ್ಮ ತಾಲೂಕಿನಲ್ಲಿ ಅಪರಲ್ ಪಾರ್ಕ್ ಗಾಗಿ ನೂರಾರು ಎಕರೆ ಸ್ವಾಧೀನ ಜಮೀನನ್ನ ರೈತರಿಂದ ಕಿತ್ತುಕೊಂಡು, ಬಂಡವಾಳಶಾಹಿಗಳಿಗೆ ಹಸ್ತಾಂತರ ಮಾಡಲಾಗಿದೆ. ಇಲ್ಲಿ ಮೂಲಭೂತ ಸ್ಥಳೀಯರಿಗೆ ಎಷ್ಟು ಉದ್ಯೋಗವನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಲಿ. ಕೆಐಎಡಿಬಿ ಒಂದು ಮಧ್ಯವರ್ತಿ ಸಂಸ್ಥೆಯಾಗಿ ನಿರ್ಮಾಣ ಆಗಿದೆ. ದೇಶದಲ್ಲಿ ಆಹಾರ ಭದ್ರತೆಗಾಗಿ 80ರ ದಶಕದಲ್ಲಿ ಬೇರೆ ದೇಶಗಳಿಗೆ ಭಿಕ್ಷೆ ಬೇಡಬೇಕಿತ್ತು. ಸಕ್ಕರೆ ಕಾರ್ಖಾನೆ, ಸೋಲಾರ್ ಯೋಜನೆಗಳು ಮೊದಲಾದ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪನೆ ಮಾಡಲಿ ಆದರೆ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಅಂತ ಯಾರೋ ಒಬ್ಬರಿಗೆ ಕೊಟ್ಟು ಬಿಟ್ಟು, ಹತ್ತು ಸಾವಿರ ಎಕರೆ ಒಬ್ಬರಿಗೆ ಕೊಟ್ಟು ವಿದ್ಯುತ್ ಉತ್ಪಾದನೆ ಮಾಡಿ ಕಳಿಸಬಾರದು, ರೈತರಿಗೆ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶ ನೀಡಬೇಕು. ಇತ್ತೀಚೆಗೆ ರಾಜ್ಯದಲ್ಲಿ ಬಲವಂತದ ಭೂಸ್ವಾಧೀನ ನಡೆಯುತ್ತಿದ್ದು, ನಮ್ಮ ತಾಲೂಕಿನಲ್ಲಿಯೂ ಸಹ ಭೂಸ್ವಾಧೀನ ನಡೆಯುತ್ತಿದೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟ ನಡೆಸಲಾಗುತ್ತಿದೆ ಎಂದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 13 ಹಳ್ಳಿಗಳಿಗೆ ಸೇರಿದ ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಅಲ್ಲಿನ ರೈತರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಜೂ.5ರಂದು ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಹೋರಾಟಕ್ಕೆ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಬೆಂಬಲಿಸಿದೆ. ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು ಮೊದಲಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರದ ರಾಣಿ ಸರ್ಕಲ್‌ ಬಳಿಯಿಂದ ಮೂಲಕ ವಿಧಾನಸೌಧ ಚಲೋ ಬೈಕ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮುಖಂಡರಾದ ಮಹೇದೇವ್, ರವಿ ಶಿರವಾರ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

11 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

1 day ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 day ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 day ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago