‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜೂ.5ರಂದು ನಡೆಯುತ್ತಿರುವ ರೈತರ ವಿಧಾನಸೌಧ ಚಲೋ ಪ್ರತಿಭಟನೆಗೆ ಬೆಂಬಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲೆಯ ರೈತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದ್ದಾರೆ.

ಈ ಕುರಿತು ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ಫಲವತ್ತಾದ ಕೃಷಿ ಭೂಮಿಗಳನ್ನು ಕೈಗಾರಿಕೆ ಹೆಸರಿನಲ್ಲಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಕ್ರಮ ಖಂಡನೀಯವಾಗಿದೆ. ನಮ್ಮ ತಾಲೂಕಿನಲ್ಲಿ ಅಪರಲ್ ಪಾರ್ಕ್ ಗಾಗಿ ನೂರಾರು ಎಕರೆ ಸ್ವಾಧೀನ ಜಮೀನನ್ನ ರೈತರಿಂದ ಕಿತ್ತುಕೊಂಡು, ಬಂಡವಾಳಶಾಹಿಗಳಿಗೆ ಹಸ್ತಾಂತರ ಮಾಡಲಾಗಿದೆ. ಇಲ್ಲಿ ಮೂಲಭೂತ ಸ್ಥಳೀಯರಿಗೆ ಎಷ್ಟು ಉದ್ಯೋಗವನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಲಿ. ಕೆಐಎಡಿಬಿ ಒಂದು ಮಧ್ಯವರ್ತಿ ಸಂಸ್ಥೆಯಾಗಿ ನಿರ್ಮಾಣ ಆಗಿದೆ. ದೇಶದಲ್ಲಿ ಆಹಾರ ಭದ್ರತೆಗಾಗಿ 80ರ ದಶಕದಲ್ಲಿ ಬೇರೆ ದೇಶಗಳಿಗೆ ಭಿಕ್ಷೆ ಬೇಡಬೇಕಿತ್ತು. ಸಕ್ಕರೆ ಕಾರ್ಖಾನೆ, ಸೋಲಾರ್ ಯೋಜನೆಗಳು ಮೊದಲಾದ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪನೆ ಮಾಡಲಿ ಆದರೆ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಅಂತ ಯಾರೋ ಒಬ್ಬರಿಗೆ ಕೊಟ್ಟು ಬಿಟ್ಟು, ಹತ್ತು ಸಾವಿರ ಎಕರೆ ಒಬ್ಬರಿಗೆ ಕೊಟ್ಟು ವಿದ್ಯುತ್ ಉತ್ಪಾದನೆ ಮಾಡಿ ಕಳಿಸಬಾರದು, ರೈತರಿಗೆ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶ ನೀಡಬೇಕು. ಇತ್ತೀಚೆಗೆ ರಾಜ್ಯದಲ್ಲಿ ಬಲವಂತದ ಭೂಸ್ವಾಧೀನ ನಡೆಯುತ್ತಿದ್ದು, ನಮ್ಮ ತಾಲೂಕಿನಲ್ಲಿಯೂ ಸಹ ಭೂಸ್ವಾಧೀನ ನಡೆಯುತ್ತಿದೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟ ನಡೆಸಲಾಗುತ್ತಿದೆ ಎಂದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 13 ಹಳ್ಳಿಗಳಿಗೆ ಸೇರಿದ ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಅಲ್ಲಿನ ರೈತರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಜೂ.5ರಂದು ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಹೋರಾಟಕ್ಕೆ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಬೆಂಬಲಿಸಿದೆ. ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು ಮೊದಲಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರದ ರಾಣಿ ಸರ್ಕಲ್‌ ಬಳಿಯಿಂದ ಮೂಲಕ ವಿಧಾನಸೌಧ ಚಲೋ ಬೈಕ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮುಖಂಡರಾದ ಮಹೇದೇವ್, ರವಿ ಶಿರವಾರ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

20 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

22 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

23 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 days ago