ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕ: ಕೆಟ್ಟುನಿಂತು ಹಲವು ತಿಂಗಳು ಕಳೆದರೂ ರಿಪೇರಿಯಾಗದೆ ನಿರುಪಯುಕ್ತ: ಶುದ್ಧ ಕುಡಿಯುವ ನೀರು ಸಿಗದೇ ಜನ ಪರದಾಟ

 

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮ‌ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೆಜ್ಜಾಜಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ಹಾಗೂ ನೈರ್ಮಲ್ಯ ಇಲಾಖೆಯಿಂದ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟುನಿಂತು ಹಲವು ತಿಂಗಳು ಕಳೆದರೂ ರಿಪೇರಿಯಾಗದೆ ನಿರುಪಯುಕ್ತವಾಗಿದೆ….

ಇದು ಆರಂಭಗೊಂಡು ಕೆಲವು ತಿಂಗಳು ಕಳೆದ ನಂತರ ಕೆಟ್ಟು ನಿಂತಿದೆ. ಇದಾಗಿ ಹಲವು ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ತಿ ಕಂಡಿಲ್ಲ. ಇದರಿಂದ ಸ್ಥಳೀಯರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಈ ಗ್ರಾಮವು ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಯಾವ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಈ ಘಟಕವನ್ನೇ ಆಶ್ರಯಿಸಿದ್ದಾರೆ. ಆದರೆ, ಘಟಕ ಬಂದ್ ಆಗಿರುವುದರಿಂದ ದೂರದ ದೊಡ್ಡಬೆಳವಂಗಲ ಹಾಗೂ ಸುತ್ತಮುತ್ತಲಿನ ನೀರಿನ ಘಟಕದಿಂದ ಶುದ್ಧ ನೀರು ತಂದು ಕುಡಿಯುತ್ತಿದ್ದಾರೆ. ಘಟಕ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಗ್ರಾಮ ಪಂಚಾಯಿತಿ ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ನೀರಿನ ಘಟಕದಿಂದ ಒಂದು ಹನಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ತಕ್ಷಣ ರಿಪೇರಿ ಮಾಡಿಸಿ ಜನರಿಗೆ ನೀರಿನ ಪೂರೈಕೆ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಊರಿನ‌ ಗ್ರಾಮಸ್ಥ ಸುಧೀರ್ ಒತ್ತಾಯಿಸಿದರು.

ಈ ಕುರಿತು ಒಂದು ವರ್ಷದ ಹಿಂದೆಯೇ ಶಾಸಕ ಧೀರಜ್ ಮುನಿರಾಜ್ ಅವರ ಗಮನಕ್ಕೆ ತರಲಾಗಿತ್ತು. ಆದರೂ ಏನೂ ಪ್ರಯೋಜನವಾಗಿಲ್ಲ. ನೀರಿನ‌ಘಟಕದ ಸುತ್ತಾಮುತ್ತ ಗಿಡಗಂಟಿಗಳು ಬೆಳೆದುಕೊಂಡು ಹುಳ ಹುಪ್ಪಟೆ ಸೇರಿಕೊಂಡಿವೆ. ನೀರು ಸರಬರಾಜು ಮಾಡುವ ಯಂತ್ರೋಪಕರಣಗಳು ತುಕ್ಕು‌ಹಿಡಿಯುತ್ತಿವೆ. ನಾವಂತೂ ಕುಡಿಯುವ ನೀರಿಗಾಗಿ ಹಾಹಾಕರಿಸುತ್ತಿದ್ದೇವೆ. ದಯವಿಟ್ಟು ಆದಷ್ಟು ಬೇಗ ಸಂಬಂಧಪಟ್ಟವರು ಕೂಡಲೇ ಕ್ರಮಕೈಗೊಂಡು ಕೆಟ್ಟುನಿಂತ ಶುದ್ದ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಿ ಜನ ಬಳಕೆಗೆ ಅನುವುಮಾಡಿಕೊಡಬೇಕಾಗಿದೆ ಎಂದು ಒತ್ತಾಯಿಸಿದರು…

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 minutes ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

2 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

14 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

15 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

16 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

20 hours ago