Categories: ಲೇಖನ

ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ….!

ಸದಾ ನೆನಪಾಗುತ್ತಾರೆ ಇವರು………..

ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.

ಎಲ್ಲಾ ಪಕ್ಷಗಳ ಅಧಿಕಾರದಾಹದ ಈ ಭಿನ್ನಮತೀಯ ಚಟುವಟಿಕೆಗಳ ದಿನನಿತ್ಯದ ನಿರಂತರ ಸುದ್ದಿಗಳನ್ನು ಕೇಳುತ್ತಾ ಮನಸ್ಸು ಏನೇನೋ ಯೋಚಿಸುತ್ತಿದೆ.

ರಾಜಕೀಯ ಎಂಬ ಸೇವಾ ವಲಯವನ್ನು ಪುಂಡ ಪೋಕರಿಗಳ, ಬೀದಿ ಜಗಳಗಳ ಮಟ್ಟಕ್ಕೆ ಇಳಿಸಿದ್ದಾರೆ. ಇವರಿಗೆ ಕ್ಷಮೆಯೇ ಇಲ್ಲ.

ಛೆ…. ಏನೂ ಮಾಡಲು ಸಾಧ್ಯವಾಗುತ್ತಿಲ್ಲ…….

ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ…………..

ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ,
7 ಕೋಟಿ ಜನರಲ್ಲಿ ಕೇವಲ 224 ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ, ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.

ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ………

ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ.

ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.

ಬಸ್ ರೈಲು ನಿಲ್ದಾಣದ ಆ ಕೆಟ್ಟ ದೃಶ್ಯಗಳನ್ನು ನೋಡಿದಾಗಲೂ ಇವರೇ ನೆನಪಾಗುತ್ತಾರೆ.

ರಸ್ತೆಯ ಆ ಧೂಳು ಆ ವಾಹನ ಭರಾಟೆಗಳನ್ನು ಕಂಡಾಗ ನೆನಪಾಗುವುದೇ ಇವರು.

ಆಹಾರದಲ್ಲಿ ಕಲಬೆರಕೆ ವಾಸನೆ ಮೂಡಿದಾಗಲೂ ಇವರೇ ನೆನಪಾಗುತ್ತಾರೆ.

ಪ್ರಕೃತಿಯ ವಿಕೋಪದ ಅನಾಹುತಗಳಲ್ಲಿಯೂ ಇವರದೇ ನೆನಪು.

ವಿದ್ಯುತ್ – ನೀರಿನ ಸಮಸ್ಯೆಗಳು ತಲೆದೋರಿದಾಗಲೂ ಇವರೇ ಕಾಡುತ್ತಾರೆ.

ನಮ್ಮ ಮಕ್ಕಳ ಭವಿಷ್ಯ ನೆನಪಾದಾಗಲೂ ಇವರೇ ಕಾಡುತ್ತಾರೆ.

ಒಟ್ಟಿನಲ್ಲಿ ನಮ್ಮ ಇಡೀ ಬದುಕನ್ನು ನಿಯಂತ್ರಿಸುವುದೇ ಇವರು.

ಈ ಜನ ಪ್ರತಿನಿಧಿಗಳ ಗುಣಮಟ್ಟದ ಮೇಲೆಯೇ ನಮ್ಮ ಜೀವನಮಟ್ಟ ಅವಲಂಬಿಸಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದು ಒಂದು ಭ್ರಮೆ ಅಷ್ಟೆ. ನಿಜವಾದ ಮಾಲಿಕರು ಇವರೇ.

ಚುನಾವಣಾ ಸಂಧರ್ಭದಲ್ಲಿ ಜನಪ್ರಿಯ ವ್ಯಕ್ತಿಗಳು ಮಹಾ ಮೇಧಾವಿಗಳಂತೆ
” ಮತದಾನ ಒಂದು ಪವಿತ್ರ ಕರ್ತವ್ಯ. ನಿಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ” ಎಂದು ಹೇಳುವವರನ್ನು ಜೈಲಿಗೆ ಕಳಿಸಬೇಕು ಎಂಬಷ್ಟು ಕೋಪ ಬರುತ್ತದೆ.

ಏಕೆಂದರೆ ಈ ಜನ ಪ್ರತಿನಿಧಿಗಳ ಹುಚ್ಚಾಟಕ್ಕೆ ಅವರೂ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತಿದೆ‌.

ಪ್ರಜಾಪ್ರಭುತ್ವದ ನಿಜ ಯಶಸ್ಸು ಅಡಗಿರುವುದೇ ಜನರ ಜಾಗೃತಿಯ, ಜ್ಞಾನದ ಮಟ್ಟದಲ್ಲಿ ಏರಿಕೆಯಾದಾಗ ಮಾತ್ರ ಸಾಧ್ಯ.

ಅಲ್ಲಿಯವರೆಗೂ ಇದನ್ನು ಸಹಿಸುವ ಅನಿವಾರ್ಯ ನಮ್ಮೆಲ್ಲರದು……..

ಬದಲಾಗಬೇಕಿದೆ ವ್ಯವಸ್ಥೆ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

10 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

10 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

21 hours ago