Categories: ಲೇಖನ

ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ….!

ಸದಾ ನೆನಪಾಗುತ್ತಾರೆ ಇವರು………..

ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.

ಎಲ್ಲಾ ಪಕ್ಷಗಳ ಅಧಿಕಾರದಾಹದ ಈ ಭಿನ್ನಮತೀಯ ಚಟುವಟಿಕೆಗಳ ದಿನನಿತ್ಯದ ನಿರಂತರ ಸುದ್ದಿಗಳನ್ನು ಕೇಳುತ್ತಾ ಮನಸ್ಸು ಏನೇನೋ ಯೋಚಿಸುತ್ತಿದೆ.

ರಾಜಕೀಯ ಎಂಬ ಸೇವಾ ವಲಯವನ್ನು ಪುಂಡ ಪೋಕರಿಗಳ, ಬೀದಿ ಜಗಳಗಳ ಮಟ್ಟಕ್ಕೆ ಇಳಿಸಿದ್ದಾರೆ. ಇವರಿಗೆ ಕ್ಷಮೆಯೇ ಇಲ್ಲ.

ಛೆ…. ಏನೂ ಮಾಡಲು ಸಾಧ್ಯವಾಗುತ್ತಿಲ್ಲ…….

ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ…………..

ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ,
7 ಕೋಟಿ ಜನರಲ್ಲಿ ಕೇವಲ 224 ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ, ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.

ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ………

ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ.

ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.

ಬಸ್ ರೈಲು ನಿಲ್ದಾಣದ ಆ ಕೆಟ್ಟ ದೃಶ್ಯಗಳನ್ನು ನೋಡಿದಾಗಲೂ ಇವರೇ ನೆನಪಾಗುತ್ತಾರೆ.

ರಸ್ತೆಯ ಆ ಧೂಳು ಆ ವಾಹನ ಭರಾಟೆಗಳನ್ನು ಕಂಡಾಗ ನೆನಪಾಗುವುದೇ ಇವರು.

ಆಹಾರದಲ್ಲಿ ಕಲಬೆರಕೆ ವಾಸನೆ ಮೂಡಿದಾಗಲೂ ಇವರೇ ನೆನಪಾಗುತ್ತಾರೆ.

ಪ್ರಕೃತಿಯ ವಿಕೋಪದ ಅನಾಹುತಗಳಲ್ಲಿಯೂ ಇವರದೇ ನೆನಪು.

ವಿದ್ಯುತ್ – ನೀರಿನ ಸಮಸ್ಯೆಗಳು ತಲೆದೋರಿದಾಗಲೂ ಇವರೇ ಕಾಡುತ್ತಾರೆ.

ನಮ್ಮ ಮಕ್ಕಳ ಭವಿಷ್ಯ ನೆನಪಾದಾಗಲೂ ಇವರೇ ಕಾಡುತ್ತಾರೆ.

ಒಟ್ಟಿನಲ್ಲಿ ನಮ್ಮ ಇಡೀ ಬದುಕನ್ನು ನಿಯಂತ್ರಿಸುವುದೇ ಇವರು.

ಈ ಜನ ಪ್ರತಿನಿಧಿಗಳ ಗುಣಮಟ್ಟದ ಮೇಲೆಯೇ ನಮ್ಮ ಜೀವನಮಟ್ಟ ಅವಲಂಬಿಸಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದು ಒಂದು ಭ್ರಮೆ ಅಷ್ಟೆ. ನಿಜವಾದ ಮಾಲಿಕರು ಇವರೇ.

ಚುನಾವಣಾ ಸಂಧರ್ಭದಲ್ಲಿ ಜನಪ್ರಿಯ ವ್ಯಕ್ತಿಗಳು ಮಹಾ ಮೇಧಾವಿಗಳಂತೆ
” ಮತದಾನ ಒಂದು ಪವಿತ್ರ ಕರ್ತವ್ಯ. ನಿಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ” ಎಂದು ಹೇಳುವವರನ್ನು ಜೈಲಿಗೆ ಕಳಿಸಬೇಕು ಎಂಬಷ್ಟು ಕೋಪ ಬರುತ್ತದೆ.

ಏಕೆಂದರೆ ಈ ಜನ ಪ್ರತಿನಿಧಿಗಳ ಹುಚ್ಚಾಟಕ್ಕೆ ಅವರೂ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತಿದೆ‌.

ಪ್ರಜಾಪ್ರಭುತ್ವದ ನಿಜ ಯಶಸ್ಸು ಅಡಗಿರುವುದೇ ಜನರ ಜಾಗೃತಿಯ, ಜ್ಞಾನದ ಮಟ್ಟದಲ್ಲಿ ಏರಿಕೆಯಾದಾಗ ಮಾತ್ರ ಸಾಧ್ಯ.

ಅಲ್ಲಿಯವರೆಗೂ ಇದನ್ನು ಸಹಿಸುವ ಅನಿವಾರ್ಯ ನಮ್ಮೆಲ್ಲರದು……..

ಬದಲಾಗಬೇಕಿದೆ ವ್ಯವಸ್ಥೆ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

22 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago