Categories: ಲೇಖನ

ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ….!

ಸದಾ ನೆನಪಾಗುತ್ತಾರೆ ಇವರು………..

ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.

ಎಲ್ಲಾ ಪಕ್ಷಗಳ ಅಧಿಕಾರದಾಹದ ಈ ಭಿನ್ನಮತೀಯ ಚಟುವಟಿಕೆಗಳ ದಿನನಿತ್ಯದ ನಿರಂತರ ಸುದ್ದಿಗಳನ್ನು ಕೇಳುತ್ತಾ ಮನಸ್ಸು ಏನೇನೋ ಯೋಚಿಸುತ್ತಿದೆ.

ರಾಜಕೀಯ ಎಂಬ ಸೇವಾ ವಲಯವನ್ನು ಪುಂಡ ಪೋಕರಿಗಳ, ಬೀದಿ ಜಗಳಗಳ ಮಟ್ಟಕ್ಕೆ ಇಳಿಸಿದ್ದಾರೆ. ಇವರಿಗೆ ಕ್ಷಮೆಯೇ ಇಲ್ಲ.

ಛೆ…. ಏನೂ ಮಾಡಲು ಸಾಧ್ಯವಾಗುತ್ತಿಲ್ಲ…….

ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ…………..

ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ,
7 ಕೋಟಿ ಜನರಲ್ಲಿ ಕೇವಲ 224 ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ, ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.

ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ………

ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ.

ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.

ಬಸ್ ರೈಲು ನಿಲ್ದಾಣದ ಆ ಕೆಟ್ಟ ದೃಶ್ಯಗಳನ್ನು ನೋಡಿದಾಗಲೂ ಇವರೇ ನೆನಪಾಗುತ್ತಾರೆ.

ರಸ್ತೆಯ ಆ ಧೂಳು ಆ ವಾಹನ ಭರಾಟೆಗಳನ್ನು ಕಂಡಾಗ ನೆನಪಾಗುವುದೇ ಇವರು.

ಆಹಾರದಲ್ಲಿ ಕಲಬೆರಕೆ ವಾಸನೆ ಮೂಡಿದಾಗಲೂ ಇವರೇ ನೆನಪಾಗುತ್ತಾರೆ.

ಪ್ರಕೃತಿಯ ವಿಕೋಪದ ಅನಾಹುತಗಳಲ್ಲಿಯೂ ಇವರದೇ ನೆನಪು.

ವಿದ್ಯುತ್ – ನೀರಿನ ಸಮಸ್ಯೆಗಳು ತಲೆದೋರಿದಾಗಲೂ ಇವರೇ ಕಾಡುತ್ತಾರೆ.

ನಮ್ಮ ಮಕ್ಕಳ ಭವಿಷ್ಯ ನೆನಪಾದಾಗಲೂ ಇವರೇ ಕಾಡುತ್ತಾರೆ.

ಒಟ್ಟಿನಲ್ಲಿ ನಮ್ಮ ಇಡೀ ಬದುಕನ್ನು ನಿಯಂತ್ರಿಸುವುದೇ ಇವರು.

ಈ ಜನ ಪ್ರತಿನಿಧಿಗಳ ಗುಣಮಟ್ಟದ ಮೇಲೆಯೇ ನಮ್ಮ ಜೀವನಮಟ್ಟ ಅವಲಂಬಿಸಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದು ಒಂದು ಭ್ರಮೆ ಅಷ್ಟೆ. ನಿಜವಾದ ಮಾಲಿಕರು ಇವರೇ.

ಚುನಾವಣಾ ಸಂಧರ್ಭದಲ್ಲಿ ಜನಪ್ರಿಯ ವ್ಯಕ್ತಿಗಳು ಮಹಾ ಮೇಧಾವಿಗಳಂತೆ
” ಮತದಾನ ಒಂದು ಪವಿತ್ರ ಕರ್ತವ್ಯ. ನಿಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ” ಎಂದು ಹೇಳುವವರನ್ನು ಜೈಲಿಗೆ ಕಳಿಸಬೇಕು ಎಂಬಷ್ಟು ಕೋಪ ಬರುತ್ತದೆ.

ಏಕೆಂದರೆ ಈ ಜನ ಪ್ರತಿನಿಧಿಗಳ ಹುಚ್ಚಾಟಕ್ಕೆ ಅವರೂ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತಿದೆ‌.

ಪ್ರಜಾಪ್ರಭುತ್ವದ ನಿಜ ಯಶಸ್ಸು ಅಡಗಿರುವುದೇ ಜನರ ಜಾಗೃತಿಯ, ಜ್ಞಾನದ ಮಟ್ಟದಲ್ಲಿ ಏರಿಕೆಯಾದಾಗ ಮಾತ್ರ ಸಾಧ್ಯ.

ಅಲ್ಲಿಯವರೆಗೂ ಇದನ್ನು ಸಹಿಸುವ ಅನಿವಾರ್ಯ ನಮ್ಮೆಲ್ಲರದು……..

ಬದಲಾಗಬೇಕಿದೆ ವ್ಯವಸ್ಥೆ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

7 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

18 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

19 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

20 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

21 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago