Categories: ಲೇಖನ

ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ….!

ಸದಾ ನೆನಪಾಗುತ್ತಾರೆ ಇವರು………..

ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.

ಎಲ್ಲಾ ಪಕ್ಷಗಳ ಅಧಿಕಾರದಾಹದ ಈ ಭಿನ್ನಮತೀಯ ಚಟುವಟಿಕೆಗಳ ದಿನನಿತ್ಯದ ನಿರಂತರ ಸುದ್ದಿಗಳನ್ನು ಕೇಳುತ್ತಾ ಮನಸ್ಸು ಏನೇನೋ ಯೋಚಿಸುತ್ತಿದೆ.

ರಾಜಕೀಯ ಎಂಬ ಸೇವಾ ವಲಯವನ್ನು ಪುಂಡ ಪೋಕರಿಗಳ, ಬೀದಿ ಜಗಳಗಳ ಮಟ್ಟಕ್ಕೆ ಇಳಿಸಿದ್ದಾರೆ. ಇವರಿಗೆ ಕ್ಷಮೆಯೇ ಇಲ್ಲ.

ಛೆ…. ಏನೂ ಮಾಡಲು ಸಾಧ್ಯವಾಗುತ್ತಿಲ್ಲ…….

ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ…………..

ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ,
7 ಕೋಟಿ ಜನರಲ್ಲಿ ಕೇವಲ 224 ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ, ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.

ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ………

ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ.

ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.

ಬಸ್ ರೈಲು ನಿಲ್ದಾಣದ ಆ ಕೆಟ್ಟ ದೃಶ್ಯಗಳನ್ನು ನೋಡಿದಾಗಲೂ ಇವರೇ ನೆನಪಾಗುತ್ತಾರೆ.

ರಸ್ತೆಯ ಆ ಧೂಳು ಆ ವಾಹನ ಭರಾಟೆಗಳನ್ನು ಕಂಡಾಗ ನೆನಪಾಗುವುದೇ ಇವರು.

ಆಹಾರದಲ್ಲಿ ಕಲಬೆರಕೆ ವಾಸನೆ ಮೂಡಿದಾಗಲೂ ಇವರೇ ನೆನಪಾಗುತ್ತಾರೆ.

ಪ್ರಕೃತಿಯ ವಿಕೋಪದ ಅನಾಹುತಗಳಲ್ಲಿಯೂ ಇವರದೇ ನೆನಪು.

ವಿದ್ಯುತ್ – ನೀರಿನ ಸಮಸ್ಯೆಗಳು ತಲೆದೋರಿದಾಗಲೂ ಇವರೇ ಕಾಡುತ್ತಾರೆ.

ನಮ್ಮ ಮಕ್ಕಳ ಭವಿಷ್ಯ ನೆನಪಾದಾಗಲೂ ಇವರೇ ಕಾಡುತ್ತಾರೆ.

ಒಟ್ಟಿನಲ್ಲಿ ನಮ್ಮ ಇಡೀ ಬದುಕನ್ನು ನಿಯಂತ್ರಿಸುವುದೇ ಇವರು.

ಈ ಜನ ಪ್ರತಿನಿಧಿಗಳ ಗುಣಮಟ್ಟದ ಮೇಲೆಯೇ ನಮ್ಮ ಜೀವನಮಟ್ಟ ಅವಲಂಬಿಸಿದೆ.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದು ಒಂದು ಭ್ರಮೆ ಅಷ್ಟೆ. ನಿಜವಾದ ಮಾಲಿಕರು ಇವರೇ.

ಚುನಾವಣಾ ಸಂಧರ್ಭದಲ್ಲಿ ಜನಪ್ರಿಯ ವ್ಯಕ್ತಿಗಳು ಮಹಾ ಮೇಧಾವಿಗಳಂತೆ
” ಮತದಾನ ಒಂದು ಪವಿತ್ರ ಕರ್ತವ್ಯ. ನಿಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ” ಎಂದು ಹೇಳುವವರನ್ನು ಜೈಲಿಗೆ ಕಳಿಸಬೇಕು ಎಂಬಷ್ಟು ಕೋಪ ಬರುತ್ತದೆ.

ಏಕೆಂದರೆ ಈ ಜನ ಪ್ರತಿನಿಧಿಗಳ ಹುಚ್ಚಾಟಕ್ಕೆ ಅವರೂ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತಿದೆ‌.

ಪ್ರಜಾಪ್ರಭುತ್ವದ ನಿಜ ಯಶಸ್ಸು ಅಡಗಿರುವುದೇ ಜನರ ಜಾಗೃತಿಯ, ಜ್ಞಾನದ ಮಟ್ಟದಲ್ಲಿ ಏರಿಕೆಯಾದಾಗ ಮಾತ್ರ ಸಾಧ್ಯ.

ಅಲ್ಲಿಯವರೆಗೂ ಇದನ್ನು ಸಹಿಸುವ ಅನಿವಾರ್ಯ ನಮ್ಮೆಲ್ಲರದು……..

ಬದಲಾಗಬೇಕಿದೆ ವ್ಯವಸ್ಥೆ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

1 hour ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

12 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

17 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago