ರಾಮೇಶ್ವರಂ ಕೆಫೆ ಬಳಿ ಬಾಂಬ್ ಸ್ಫೋಟವನ್ನ ಖಂಡಿಸುತ್ತೇನೆ. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಈ ಬಾಂಬ್ ಸ್ಫೋಟ ಪ್ರಕರಣವನ್ನ ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ರಾಜಕೀಯ ಕೆಸರೆರಚಾಟದಲ್ಲಿ ಮಗ್ನರಾಗಿರುವುದು ಸೂಕ್ತವಲ್ಲ. ಈ ರೀತಿಯ ಪ್ರಕರಣಗಳಲ್ಲಿ ಯಾರೂ ಸಹ ರಾಜಕೀಯ ಮಾಡದೇ ರಾಜ್ಯದ ಜನರ ಭದ್ರತೆಯ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದರು.
ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೇ ಮಾಡಬೇಕು. ಅಗತ್ಯ ಬಿದ್ದರೆ ಎನ್.ಐ.ಗೆ ವಹಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ನಗರ ದೇಶದಲ್ಲಿ ಸುರಕ್ಷಿತವಾದ ತಾಣ ಇಂತಹ ತಾಣದಲ್ಲಿ ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ, ಅದು ದೇಶ ವಿರೋಧಿ ಚಟುವಟಿಕೆ, ದೇಶದ ಅನ್ನ, ನೀರು, ಆಶ್ರಯ ಪಡೆದು ಈ ರೀತಿ ದ್ರೋಹ ಬಗೆಯುವವರನ್ನ ಕ್ಷಮಿಸಬಾರದು, ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…