ಕೆಫೆ ಬಳಿ ಬಾಂಬ್ ಸ್ಫೋಟ ಹಾಗೂ ಪಾಕ್ ಪರ ಘೋಷಣೆ ಪ್ರಕರಣದಲ್ಲಿ ರಾಜಕೀಯ ಮಾಡದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಗ್ರಹ

ರಾಮೇಶ್ವರಂ ಕೆಫೆ ಬಳಿ ಬಾಂಬ್ ಸ್ಫೋಟವನ್ನ ಖಂಡಿಸುತ್ತೇನೆ. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ಈ ಬಾಂಬ್ ಸ್ಫೋಟ ಪ್ರಕರಣವನ್ನ ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ರಾಜಕೀಯ ಕೆಸರೆರಚಾಟದಲ್ಲಿ ಮಗ್ನರಾಗಿರುವುದು ಸೂಕ್ತವಲ್ಲ. ಈ ರೀತಿಯ ಪ್ರಕರಣಗಳಲ್ಲಿ ಯಾರೂ ಸಹ ರಾಜಕೀಯ ಮಾಡದೇ ರಾಜ್ಯದ ಜನರ ಭದ್ರತೆಯ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದರು.

ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೇ ಮಾಡಬೇಕು. ಅಗತ್ಯ ಬಿದ್ದರೆ ಎನ್.ಐ.ಗೆ ವಹಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ನಗರ ದೇಶದಲ್ಲಿ ಸುರಕ್ಷಿತವಾದ ತಾಣ ಇಂತಹ ತಾಣದಲ್ಲಿ ಈ‌ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ, ಅದು‌ ದೇಶ‌ ವಿರೋಧಿ ಚಟುವಟಿಕೆ, ದೇಶದ ಅನ್ನ, ನೀರು, ಆಶ್ರಯ ಪಡೆದು ಈ ರೀತಿ ದ್ರೋಹ ಬಗೆಯುವವರನ್ನ ಕ್ಷಮಿಸಬಾರದು, ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

22 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago