ರಾಮೇಶ್ವರಂ ಕೆಫೆ ಬಳಿ ಬಾಂಬ್ ಸ್ಫೋಟವನ್ನ ಖಂಡಿಸುತ್ತೇನೆ. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಈ ಬಾಂಬ್ ಸ್ಫೋಟ ಪ್ರಕರಣವನ್ನ ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ರಾಜಕೀಯ ಕೆಸರೆರಚಾಟದಲ್ಲಿ ಮಗ್ನರಾಗಿರುವುದು ಸೂಕ್ತವಲ್ಲ. ಈ ರೀತಿಯ ಪ್ರಕರಣಗಳಲ್ಲಿ ಯಾರೂ ಸಹ ರಾಜಕೀಯ ಮಾಡದೇ ರಾಜ್ಯದ ಜನರ ಭದ್ರತೆಯ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದರು.
ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೇ ಮಾಡಬೇಕು. ಅಗತ್ಯ ಬಿದ್ದರೆ ಎನ್.ಐ.ಗೆ ವಹಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ನಗರ ದೇಶದಲ್ಲಿ ಸುರಕ್ಷಿತವಾದ ತಾಣ ಇಂತಹ ತಾಣದಲ್ಲಿ ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿರುವುದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ, ಅದು ದೇಶ ವಿರೋಧಿ ಚಟುವಟಿಕೆ, ದೇಶದ ಅನ್ನ, ನೀರು, ಆಶ್ರಯ ಪಡೆದು ಈ ರೀತಿ ದ್ರೋಹ ಬಗೆಯುವವರನ್ನ ಕ್ಷಮಿಸಬಾರದು, ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…