Categories: ಕೋಲಾರ

ಕೆಯುಡಿಎ ವತಿಯಿಂದ ಎಲ್ಲದಕ್ಕೂ ಅನುಮತಿ ಕೊಟ್ಟರೆ ಮುಂದಿನ ಅನಾಹುತಗಳಿಗೆ ಹೊಣೆ ಯಾರು?-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

5 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

11 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

13 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

14 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

15 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

19 hours ago