Categories: ಕೋಲಾರ

ಕೆಯುಡಿಎ ವತಿಯಿಂದ ಎಲ್ಲದಕ್ಕೂ ಅನುಮತಿ ಕೊಟ್ಟರೆ ಮುಂದಿನ ಅನಾಹುತಗಳಿಗೆ ಹೊಣೆ ಯಾರು?-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

14 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago