Categories: ಕೋಲಾರ

ಕೆಯುಡಿಎ ವತಿಯಿಂದ ಎಲ್ಲದಕ್ಕೂ ಅನುಮತಿ ಕೊಟ್ಟರೆ ಮುಂದಿನ ಅನಾಹುತಗಳಿಗೆ ಹೊಣೆ ಯಾರು?-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago