Categories: ಕೋಲಾರ

ಕೆಯುಡಿಎ ವತಿಯಿಂದ ಎಲ್ಲದಕ್ಕೂ ಅನುಮತಿ ಕೊಟ್ಟರೆ ಮುಂದಿನ ಅನಾಹುತಗಳಿಗೆ ಹೊಣೆ ಯಾರು?-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago