ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದರು.
144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…