ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ- ಸಿಎಂ ಸಿದ್ದರಾಮಯ್ಯ

ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದರು.

144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

5 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

6 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

17 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

17 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

17 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago