ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದರು.
144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…