ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದರು.
144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…