ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ‌ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತು ನಗರದ ಪ್ರವಾಸಿ‌ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ‌ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ‌ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ‌ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ‌ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದಲೂ ನಮಗೆ ಮೋಸ:

ಜನಪ್ರತಿನಿಧಿಗಳಂತೆ ಅಧಿಕಾರಿಗಳು‌ ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ‌ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಣ್ಣಿದ್ದು ಕುರುಡಾದ ಆಡಳಿತ:

ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಹಸಿರು ನ್ಯಾಯಪೀಠಕ್ಕೂ ಅರ್ಜಿ:

ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

1 hour ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

4 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

7 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

19 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

21 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

21 hours ago