ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ ಖಡಕ್ ಎಚ್ಚರಿಕೆ ನೀಡಿದೆ.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.
ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳಂತೆ ಅಧಿಕಾರಿಗಳು ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.
ಕಣ್ಣಿದ್ದು ಕುರುಡಾದ ಆಡಳಿತ:
ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಹಸಿರು ನ್ಯಾಯಪೀಠಕ್ಕೂ ಅರ್ಜಿ:
ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…