ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ ಖಡಕ್ ಎಚ್ಚರಿಕೆ ನೀಡಿದೆ.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.
ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳಂತೆ ಅಧಿಕಾರಿಗಳು ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.
ಕಣ್ಣಿದ್ದು ಕುರುಡಾದ ಆಡಳಿತ:
ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಹಸಿರು ನ್ಯಾಯಪೀಠಕ್ಕೂ ಅರ್ಜಿ:
ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…