ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ‌ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತು ನಗರದ ಪ್ರವಾಸಿ‌ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ‌ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ‌ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ‌ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ‌ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದಲೂ ನಮಗೆ ಮೋಸ:

ಜನಪ್ರತಿನಿಧಿಗಳಂತೆ ಅಧಿಕಾರಿಗಳು‌ ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ‌ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಣ್ಣಿದ್ದು ಕುರುಡಾದ ಆಡಳಿತ:

ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಹಸಿರು ನ್ಯಾಯಪೀಠಕ್ಕೂ ಅರ್ಜಿ:

ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

20 minutes ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

1 hour ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

4 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

4 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

6 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

7 hours ago