ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ‌ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತು ನಗರದ ಪ್ರವಾಸಿ‌ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ‌ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ‌ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ‌ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ‌ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದಲೂ ನಮಗೆ ಮೋಸ:

ಜನಪ್ರತಿನಿಧಿಗಳಂತೆ ಅಧಿಕಾರಿಗಳು‌ ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ‌ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಣ್ಣಿದ್ದು ಕುರುಡಾದ ಆಡಳಿತ:

ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಹಸಿರು ನ್ಯಾಯಪೀಠಕ್ಕೂ ಅರ್ಜಿ:

ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

6 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

8 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

13 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

14 hours ago