ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ‌ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತು ನಗರದ ಪ್ರವಾಸಿ‌ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ‌ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ‌ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ‌ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ‌ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದಲೂ ನಮಗೆ ಮೋಸ:

ಜನಪ್ರತಿನಿಧಿಗಳಂತೆ ಅಧಿಕಾರಿಗಳು‌ ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ‌ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಣ್ಣಿದ್ದು ಕುರುಡಾದ ಆಡಳಿತ:

ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಹಸಿರು ನ್ಯಾಯಪೀಠಕ್ಕೂ ಅರ್ಜಿ:

ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

1 hour ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago