ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ‌ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತು ನಗರದ ಪ್ರವಾಸಿ‌ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ‌ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ‌ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ‌ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ‌ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದಲೂ ನಮಗೆ ಮೋಸ:

ಜನಪ್ರತಿನಿಧಿಗಳಂತೆ ಅಧಿಕಾರಿಗಳು‌ ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ‌ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಣ್ಣಿದ್ದು ಕುರುಡಾದ ಆಡಳಿತ:

ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಹಸಿರು ನ್ಯಾಯಪೀಠಕ್ಕೂ ಅರ್ಜಿ:

ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

1 hour ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

5 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

16 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

16 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

20 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

21 hours ago