ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ  ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.

ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

11 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

22 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

24 hours ago