ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ  ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.

ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago