ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ  ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.

ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago