ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ  ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.

ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

4 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

5 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

6 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

11 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

12 hours ago