ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.
ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.
ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…