ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.
ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.
ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…